ADVERTISEMENT

PHOTOS | ಚಕ್ಕಾ ಜಾಮ್; ರಾಜ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲಿಸಿ 'ಚಕ್ಕಾ ಜಾಮ್'ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿರುವ ರೈತ ಸಂಘಟನೆಗಳಿಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ದೊರಕಿದೆ. ಹಲೆವೆಡೆ ಹೆದ್ದಾರಿಗಳಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕೆಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 8:07 IST
Last Updated 6 ಫೆಬ್ರುವರಿ 2021, 8:07 IST
ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಬಿಎಸ್ ಪಿ ಕಾರ್ಯಕರ್ತರಿಂದ ಚಾಮರಾಜನಗರ ಬಳಿ ರಾಷ್ಟ್ರೀಯ ಹೆದ್ದಾರಿ 209 ತಡೆದು ಪ್ರತಿಭಟನೆ
ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಬಿಎಸ್ ಪಿ ಕಾರ್ಯಕರ್ತರಿಂದ ಚಾಮರಾಜನಗರ ಬಳಿ ರಾಷ್ಟ್ರೀಯ ಹೆದ್ದಾರಿ 209 ತಡೆದು ಪ್ರತಿಭಟನೆ   
ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಟೋಲ್ ಬಳಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಬೆಳಗಾವಿ: ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು
ಹುಬ್ಬಳ್ಳಿ ನವಲಗುಂದ ರಸ್ತೆಯ ಕಿರೆಸೂರಿನ ಬಲದಂಡೆ ಕಾಲುವೆ ಬಳಿಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ
ಮಂಡ್ಯ: ಹೆದ್ದಾರಿಯಲ್ಲೇ ಅಡುಗೆ ಮಾಡುತ್ತಿರುವ ರೈತರು
ಮೈಸೂರು: ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ಮೈಸೂರು ಬೆಂಗಳೂರು ಹೆದ್ದಾರಿ, ರಿಂಗ್ ರಸ್ತೆ ತಡೆದು ಪ್ರತಿಭಟನೆ
ಶಿವಮೊಗ್ಗದಲ್ಲಿ ರೈತ ಸಂಘಟನೆಯ ಪ್ರತಿಭಟನೆ
ತಿಪಟೂರು ತಾಲ್ಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 206 ನಲ್ಲಿ ರೈತರ ಪ್ರತಿಭಟನೆ
ಹುಬ್ಬಳ್ಳಿ ಬಳಿ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರ ಭದ್ರತೆ
ಕುರುಕೋಡು ತಾಲ್ಲೂಕು ಕೋಳೂರು ಕ್ರಾಸ್ ಬಳಿ ರೈತ ಸಂಘಟನೆಗಳ ಮುಖಂಡರು ಶ್ರೀರಂಗಪಟ್ಟಣ ಬೀದರ್ ರಾಜ್ಯ ಹೆದ್ದಾರಿ ತಡೆದರು
ಮಂಡ್ಯ ಹೊರವಲಯ ವಿ.ಸಿ.ಫಾರಂ ಗೇಟ್ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆ
ಮೈಸೂರಿನಲ್ಲಿ ಪ್ರತಿಭಟನಕಾರರನ್ನು ಬಂಧಿಸಲಾಯಿತು
ತುಮಕೂರಿನಲ್ಲಿ ಬಂಧನದ ವೇಳೆ ಪೊಲೀಸರು ಮತ್ತು ರೈತರ ಚಕಮಕಿ
ಶಿವಮೊಗ್ಗದಲ್ಲಿ ಹೆದ್ದಾರಿಗಳಲ್ಲಿ ವಾಹನ ತಡೆದು ಪ್ರತಿಭಟಿಸಿದ ರೈತರು
ರೈತರಿಂದ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.