ADVERTISEMENT

ಫ್ಯಾಸಿಸ್ಟ್ ಸಿದ್ಧಾಂತ ಎಂದಿಗೂ ಜನರ ಹೃದಯ ಗೆಲ್ಲಲು ಸಾಧ್ಯವಿಲ್ಲ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 9:43 IST
Last Updated 11 ಫೆಬ್ರುವರಿ 2020, 9:43 IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮೂರನೇ ಬಾರಿಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕಆಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಫ್ಯಾಸಿಸ್ಟ್ ಸಿದ್ಧಾಂತವು ಎಂದಿಗೂ ಜನರ ಹೃದಯ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಜನರು ತೋರಿಸಿದ್ದಾರೆ. ಹಣ, ತೋಳ್ಬಲಗಳಿಲ್ಲದೆಯೂ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿಸಿ ಯಶಸ್ವಿ ರಾಜಕಾರಣದ ಸಾಧ್ಯತೆಯನ್ನು ಸಾಕ್ಷೀಕರಿಸಿದ ಎಎಪಿ ಹಾಗೂ ದೆಹಲಿ ಮತದಾರರಿಗೆ ಅಭಿನಂದನೆ' ಎಂದು ಹೇಳಿದ್ದಾರೆ.

ಅಭಿವೃದ್ಧಿಯ ಹರಿಕಾರನನ್ನು 'ಭಯೋತ್ಪಾದಕ' ಎಂದಿದ್ದಕ್ಕಾಗಿ ತಕ್ಕ ಪಾಠ ಕಲಿಸಿದ್ದಾರೆ. ಈ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಎತ್ತಿಹಿಡಿದ ದೆಹಲಿಯ ಮತದಾರರು ತಮ್ಮ ಆದ್ಯತೆ ಅಭಿವೃದ್ಧಿಗಷ್ಟೇ ಎಂಬುದಕ್ಕೆ ಮೇಲ್ಪಂಕ್ತಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಬಿಜೆಪಿ, ಅದರಲ್ಲೂ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಇಡೀ ಕೇಂದ್ರ ಸರಕಾರ ತನ್ನ 'ಚಾಣಕ್ಯ' ಬಲ ಪ್ರದರ್ಶಿಸಿದರೂ ದೆಹಲಿಯ ಪ್ರಬುದ್ಧ ಮತದಾರ ತನ್ನ ನಿಲುವು ಬದಲಿಸಲಿಲ್ಲ. ಜನತಾ ನ್ಯಾಯಾಲಯದ ಈ ತೀರ್ಪು ಸ್ವಾಗತಾರ್ಹ ಎಂದು ಕುಮಾರಸ್ವಾಮಿ ಆಮ್ ಆದ್ಮಿ ಸಾಧನೆಯನ್ನು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.