ರಾಮನಗರ: ತಾಲ್ಲೂಕಿನ ಕಟಮಾನದೊಡ್ಡಿ ನಿವಾಸಿ ರಾಮಚಂದ್ರ (38) ಪುತ್ರಿ ವರ್ಷಾ ಜೊತೆ ಬುಧವಾರ ಬೆಳಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಮಚಂದ್ರ ಮಡದಿ, ಮಕ್ಕಳೊಂದಿಗೆ ರಾಮನಗರದಲ್ಲಿ ವಾಸವಿದ್ದರು. ಮಂಗಳವಾರ ರಾತ್ರಿ ಹೆಂಡತಿ ಜೊತೆ ಜಗಳ ಮಾಡಿಕೊಂಡು ಕಟಮಾನದೊಡ್ಡಿಗೆ ಬಂದಿದ್ದರು. ಊರಿನ ಮನೆಯಲ್ಲಿ ಮೊದಲು ಮಗಳಿಗೆ ನೇಣು ಹಾಕಿದ ರಾಮಚಂದ್ರ, ಬಳಿಕ ತಾವೂ ನೇಣು ಬಿಗಿದುಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು ಸೆಲ್ಫಿ ವಿಡಿಯೊ ಮಾಡಿದ್ದು, ಹೆಂಡತಿಯ ನಡತೆಯೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅವರ ಪತ್ನಿ ಪರಾರಿ ಆಗಿದ್ದಾರೆ. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.