ಬೆಂಗಳೂರು: ಬಿಜೆಪಿ ಸದಸ್ಯರು ನಡೆಸಿದ ಧರಣಿ ಹಾಗೂ ಗದ್ದಲದ ನಡುವೆಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಜೆಟ್ನ ಪಾರ್ಶ್ವಿಕ ಮೊತ್ತವಾದ ₹ 80,168 ಕೋಟಿ ಲೇಖಾನುದಾನಕ್ಕೆ ಗುರುವಾರ ಉಭಯ ಸದನಗಳಲ್ಲೂ ಒಪ್ಪಿಗೆ ಪಡೆದರು.
2019-2020ನೇ ಸಾಲಿಗೆ ₹ 2.34 ಲಕ್ಷ ಕೋಟಿ ಗಾತ್ರದ ಬಜೆಟ್ಅನ್ನು ಅವರು ಕಳೆದ ಶುಕ್ರವಾರ ಮಂಡಿಸಿದ್ದರು. ಅದರ ಮೂರನೇ ಒಂದು ಭಾಗದಷ್ಟು ಹಣವನ್ನು ಹೊಸ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳ ಅವಧಿಯಲ್ಲಿ ವ್ಯಯಿಸಲು ಅವರೀಗ ಶಾಸನಸಭೆಯ ಅನುಮೋದನೆ ಪಡೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.