ಬಾಗಲಕೋಟೆ: ಜಿಲ್ಲಾಡಳಿತದ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಬೆಳಿಗ್ಗೆ ಎಫ್ ಐಆರ್ ದಾಖಲಾಗಿದೆ.
ನಗರದ ಪತ್ತೇಶಾವಲಿ ದರ್ಗಾದ ಆವರಣದಲ್ಲಿದ್ದ ಕೊಠಡಿಯಲ್ಲಿ ಶನಿವಾರ ರಾತ್ರಿ ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ (ನಮಾಜ್) ತೊಡಗಿದ್ದರು.
ಸುದ್ದಿ ತಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಪ್ರಾರ್ಥನೆ ಮುಗಿಸಿ ಹೊರಬಂದವರಿಗೆ ಲಾಠಿ ಚಾರ್ಜ್ ಮಾಡಿದ್ದರು. ಬೆಳಿಗ್ಗೆ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.