ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ವಿರುದ್ಧ ಧಾರ್ಮಿಕ ಸಂಸ್ಥೆಗಳ ದುರುಪಯೋಗ ಸಂಬಂಧ ದೂರು ದಾಖಲಾಗಿದೆ.
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚಿತ್ರದುರ್ಗ ತಾಲ್ಲೂಕಿನ ಫ್ಲೈಯಿಂಗ್ ಸ್ವ್ಯಾಡ್ (ರೂರಲ್) ನೀಡಿದ ದೂರಿನ ಮೇರೆಗೆ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಮಾರ್ಚ್ 31ರಂದು ರಾಜ್ಯ ಮಟ್ಟದ ಭೋವಿ ಜನಾಂಗದ ಚಿಂತನ-ಮಂಥನ ಸಭೆಯನ್ನು ಯಾವುದೇ ಅನುಮತಿ ಪಡೆಯದೇ ನಡೆಸಲಾಗಿದೆ. ಈ ಸಭೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.