ಶ್ರೀರಂಗಪಟ್ಟಣ: ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ತಾಲ್ಲೂಕಿನ ಗಣಂಗೂರು ಬಳಿ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟುಹೋಗಿದೆ.
ಬಸ್ ಕರಕಲಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ 36 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರ ಅರ್ಧದಷ್ಟು ವಸ್ತುಗಳು ನಾಶವಾಗಿವೆ. ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಇಡೀ ಬಸ್ಗೆ ವ್ಯಾಪಿಸಿದೆ. ವೈರ್ನಲ್ಲಿ ಉಂಟಾದ ದೋಷದಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಈ ಬಸ್ ಕೇರಳದ ಕೊಯಿಕೋಡ್ನಿಂದ ಬೆಂಗಳೂರುಕಡೆಗೆ ತೆರಳುತ್ತಿತ್ತು. ಶುಕ್ರವಾರ ರಾತ್ರಿ 11 ಗಂಟೆಗೆ ಹೊರಟಿದ್ದು, ಶನಿವಾರ ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಗಣಂಗೂರು ಬಳಿ ಬಂದಿದೆ. ಎಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿ, ನಿದ್ರಿಸುತ್ತಿದ್ದ 36 ಮಂದಿ ಪ್ರಯಾಣಿಕರನ್ನು ಎಚ್ಚರಿಸಿ ಕೆಳಕ್ಕೆ ಇಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.