ADVERTISEMENT

ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ

ನಾಲ್ವರಿಗೆ ಗಾಯ: ಇಬ್ಬರನ್ನು ಹಿಡಿದ ಸ್ಥಳೀಯರು

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 18:53 IST
Last Updated 30 ಅಕ್ಟೋಬರ್ 2020, 18:53 IST
ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಆರೋಪಿಗಳು
ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಆರೋಪಿಗಳು   

ಮಂಗಳೂರು: ನಗರದ ಫಳ್ನೀರ್‌ನ ಹೋಟೆಲ್‌ನಲ್ಲಿ ಶುಕ್ರವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಹೊಡೆದಾಟ
ದಲ್ಲಿ, ಗುಂಡಿನ ದಾಳಿ ನಡೆದಿದೆ. ಗುಂಡೇಟಿನಿಂದ ಫಳ್ನೀರ್‌ನ ಶಾಹಿಲ್ ಮತ್ತು ಸುರತ್ಕಲ್‌ನ ಸೈಫ್‌ ತೀವ್ರ ಗಾಯ
ಗೊಂಡಿದ್ದಾರೆ. ಜಗಳದಲ್ಲಿ ಸಿದ್ದೀಕ್ ಮತ್ತು ಹಾಝಿಲ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸಂಜೆ 5.30ರ ವೇಳೆ ತಿಂಡಿಯ ವಿಚಾರದಲ್ಲಿ ಜಗಳ ಆರಂಭವಾಗಿದೆ. ಹೋಟೆಲ್‌ಗೆ ಬಂದಿದ್ದ ಯುವಕರ ತಂಡ,
ಸಮೋಸ ಕೇಳಿದೆ. ಈ ಮಧ್ಯೆ ತಂಡದ ಇಬ್ಬರು ಹೋಟೆಲ್‌ ಸಿಬ್ಬಂದಿ ಜೊತೆ ಜಗಳ ತೆಗೆದಿದ್ದಾರೆ. ಆಗ ಹೊಡೆದಾಟ ಆರಂಭವಾಗಿದ್ದು, ಪೀಠೋಪಕರಣ ಧ್ವಂಸಗೊಳಿಸಿ ಪರಾರಿಗೆ ಯತ್ನಿಸಿದ್ದಾರೆ.

ಅವರನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ ಎರಡು ಸುತ್ತು ಗುಂಡು ಹಾರಿಸಲಾಗಿದೆ. ಗುಂಡೇಟಿನಿಂದ ಇಬ್ಬರು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಸ್ಥಳೀಯರು ಸೇರಿ ಇಬ್ಬರನ್ನು ಹಿಡಿದಿದ್ದು, ಇನ್ನಿಬ್ಬರು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದಾರೆ.

ADVERTISEMENT

ಘಟನೆಯಲ್ಲಿ ಏರ್ ಪಿಸ್ತೂಲ್‌ನಿಂದ ಗುಂಡು ಹೊಡೆದಿರುವ ಸಾಧ್ಯತೆ ಇದ್ದು, ತನಿಖೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳ ಬಳಿ ಪಿಸ್ತೂಲ್ ಹೇಗೆ ಬಂತು ಎನ್ನುವ ವಿಷಯದಲ್ಲೂ ತನಿಖೆ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.