ಕಲಬುರ್ಗಿ: ‘ಸಚಿವನಾಗಿ ಮೊದಲು ಸರ್ಕಾರದ ಪರ, ನಂತರ ಪಕ್ಷದ ಪರ ಬ್ಯಾಟಿಂಗ್ ಮಾಡುತ್ತೇನೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮತ್ತು ಪಕ್ಷದ ನಂತರ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಬ್ಯಾಟಿಂಗ್ ಮಾಡುತ್ತೇನೆ. ಹೀಗಾಗಿ ಅವರ ಪರ, ಇವರ ಪರ ಬ್ಯಾಟಿಂಗ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ತಿಳಿಸಿದರು.
‘ಸಮ್ಮಿಶ್ರ ಸರ್ಕಾರದ ಆಯಸ್ಸು ಒಂದು ವರ್ಷ ಅಂತ ಸಿದ್ದರಾಮಯ್ಯ ಅವರು ಹೇಳಿಲ್ಲ. ಜೆಡಿಎಸ್ ಜತೆ ನಾವು ಐದು ವರ್ಷದ ಸ್ಥಿರ ಸರ್ಕಾರಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ಸರ್ಕಾರದ ಅವಧಿಯ ಬಗ್ಗೆ ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.