ADVERTISEMENT

ಎಪಿಎಂಸಿ ಕಾಯ್ದೆ ತಿದ್ದುಪಡಿ ಸ್ವಾಗತಾರ್ಹ: ಎಫ್‌ಕೆಸಿಸಿಐ

​ಪ್ರಜಾವಾಣಿ ವಾರ್ತೆ
Published 16 ಮೇ 2020, 19:45 IST
Last Updated 16 ಮೇ 2020, 19:45 IST
ಬೆಂಗಳೂರಿನ ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆ
ಬೆಂಗಳೂರಿನ ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆ    

ಬೆಂಗಳೂರು: ‘ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಕಾಯ್ದೆಯಿಂದ ವ್ಯಾಪಾರಸ್ಥರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಯ ನೀಡಿದ್ದಾರೆ. ಈ ಕಾಯ್ದೆಯನ್ನುಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಸ್ವಾಗತಿಸುತ್ತದೆ’ ಎಂದು ಸಂಸ್ಥೆಯ ಅಧ್ಯಕ್ಷ ಜಿ.ಆರ್. ಜನಾರ್ದನ ಹೇಳಿದ್ದಾರೆ.

ಎಫ್‌ಕೆಸಿಸಿಐಅಧ್ಯಕ್ಷ
ಜಿ.ಆರ್. ಜನಾರ್ದನ

‘ಈ ಕಾಯ್ದೆ ಜಾರಿಗೆ ತರುತ್ತಿರುವುದು ರೈತರ ಅನುಕೂಲಕ್ಕಾಗಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕಾಯ್ದೆ ಜಾರಿಗೆ ನಮ್ಮ ಅಭ್ಯಂತರವಿಲ್ಲ’ ಎಂದು ಅವರು ಶನಿವಾರ ಹೇಳಿದರು.

‘ಎಪಿಎಂಸಿಗಳಲ್ಲಿ ಹಾಲಿ ಚಾಲ್ತಿಯಲ್ಲಿರುವ ಸೆಸ್ ಅನ್ನು ಶೇ 1.5 ರಿಂದ ಶೇ 0.5ಕ್ಕೆ ಇಳಿಸಲು ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಎಪಿಎಂಸಿ ಪ್ರಾಂಗಣದ ಒಳಗೆ ಹಾಗೂ ಹೊರಗೆ ವ್ಯತ್ಯಾಸದ ಶುಲ್ಕಗಳನ್ನು ವಿಧಿಸಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೋರಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.