ಬೆಂಗಳೂರು: ಶಿವಮೊಗ್ಗದಿಂದ ತಿರುಪತಿ, ಗೋವಾ ಹಾಗೂ ಹೈದರಾಬಾದ್ಗೆ ವಿಮಾನಯಾನ ಸೇವೆ ಶೀಘ್ರ ಆರಂಭವಾಗಲಿದೆ. ಮೂರು ಸಂಸ್ಥೆಗಳಿಗೆ ಅನುಮತಿ ದೊರೆತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಆಗಸ್ಟ್ 31ರಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ ನಡೆಸಲಿದೆ. ಇಂಡಿಗೊ ಏರ್ಲೈನ್ಸ್ ಈಗಾಗಲೇ ಬುಕ್ಕಿಂಗ್ ಸೇವೆ ಆರಂಭಿಸಿದೆ. ಮೊದಲು ಹಾರಲಿರುವ ವಿಮಾನದಲ್ಲಿ ಪ್ರಯಾಣಿಸುವ ಅವಕಾಶಕ್ಕೆ ಸಾಕಷ್ಟು ಬೇಡಿಕೆ ಬಂದಿದೆ. ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ಸ್ಪೈಸ್ ಜೆಟ್, ಸ್ಟಾರ್ ಏರ್ಲೈನ್ಸ್ ಹಾಗೂ ಅಲಯನ್ಸ್ ಸಂಸ್ಥೆಗಳು ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿವೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ದೊರೆತ ನಂತರ ಸೇವೆ ಆರಂಭಿಸಲಿವೆ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.