ಮೈಸೂರು: ಇಲ್ಲಿನ ಕಬಿನಿ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾಗಿದ್ದು, ನದಿಗೆ 35 ಸಾವಿರ ಕ್ಯುಸೆಕ್ ನಷ್ಟು ನೀರು ಬಿಡಲಾಗುತ್ತಿದೆ. ಕಪಿಲಾ ನದಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶದಲ್ಲಿ ಇರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕೇರಳದ ವೈನಾಡು ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಜಲಾಶಯದ ಒಳ ಹರಿವಿನ ಪ್ರಮಾಣ 35 ಸಾವಿರ ಕ್ಯುಸೆಕ್ ತಲುಪಿದೆ.
ಈಗಾಗಲೇ ಸಮೀಪದ ಬಿದರಹಳ್ಳಿ ಸೇತುವೆ ಜಲಾವೃತವಾಗಿದೆ. ನದಿ ಪಾತ್ರದ ಗದ್ದೆಗಳಿಗೆ ನೀರು ನುಗ್ಗುವ ಭೀತಿ ಸೃಷ್ಟಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.