ಹಾವೇರಿ: ಶಾಸಕ ನೆಹರೂ ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಟ್ಯಾಂಕ್ ಮೇಲಿಂದ ಬಿದ್ದು ಸಾಯುತ್ತೇವೆ ಎಂದು ಇಬ್ಬರು ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿರುವ ಸುಮಾರು 100 ಅಡಿ ಎತ್ತರದ ನೀರಿನ ಟ್ಯಾಂಕ್ ಮೇಲೆ ನಿಂತು ಪ್ರತಿಭಟನೆ ನಡೆಸಿದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.
ಹಾವೇರಿ ಜಿಲ್ಲೆ ಹತ್ತಿಮತ್ತೂರು ಗ್ರಾಮದ ಚಂದ್ರಶೇಖರ್ ಮತ್ತು ಹಾಗೂ ಭೀಮನಗೌಡ ಪಾಟೀಲ ಪ್ರತಿಭಟನೆ ನಡೆಸಿದವರು.
ಸ್ಥಳಕ್ಕೆ ತಹಶೀಲ್ದಾರ್ ಗಿರೀಶ ಸ್ವಾದಿ, ಪೊಲೀಸರು ಮತ್ತು ನಗರಸಭೆ ಸದಸ್ಯ ಶಿವರಾಜ ಅವರು ಬಂದು ಪ್ರತಿಭಟನಾಕಾರರ ಮನವೊಲಿಸಿದರು.
ನಂತರ ಪ್ರತಿಭಟನಾಕಾರರು ಟ್ಯಾಂಕ್ ಇಳಿದು ಬರುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.