ಬೆಂಗಳೂರು: ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್ಸಿ) ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನಗರದ ಹೊರವಲಯದಲ್ಲಿರುವ ವಿದೇಶಿಯರ ಬಂಧನ ಕೇಂದ್ರ ಶೀಘ್ರ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.
‘ನೆಲಮಂಗಲ ಬಳಿ ಈ ಕೇಂದ್ರವಿದ್ದು, ಕೆಲವು ಸಿದ್ಧತೆಗಳು ನಡೆದಿವೆ. ಅಗತ್ಯ ಕೆಲಸಗಳು ಪೂರ್ಣಗೊಂಡ ನಂತರ ಕಾರ್ಯಾರಂಭ ಮಾಡಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.