ಬೆಂಗಳೂರು: ‘ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದಲ್ಲಿ ಶಿವಲಿಂಗಪ್ಪ ಅವರ ಮೇಲೆ ದಾಳಿ ಮಾಡಿದ ಹುಲಿ ಪತ್ತೆಗೆ ಡ್ರೋನ್ ಕ್ಯಾಮೆರಾ ಬಳಸಿ ಶೋಧ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ ವಿಧಾನಸಭೆಗೆ ತಿಳಿಸಿದರು.
ಸಿ.ಎಸ್.ನಿರಂಜನ್ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಚೌಡಳ್ಳಿ ಮತ್ತು ಹುಂಡಿಪುರ ಗ್ರಾಮಗಳ ಆಸುಪಾಸಿನ ಪ್ರದೇಶಗಳಲ್ಲಿ ಉಪಟಳ ನೀಡುತ್ತಿರುವ ಹುಲಿಯನ್ನು ಸೆರೆ ಹಿಡಿಯಲು 120ಕ್ಕೂ ಹೆಚ್ಚು ಸಿಬ್ಬಂದಿ ಐದು ತಂಡಗಳಲ್ಲಿ ಶೋಧ ಕಾರ್ಯನಿರತರಾಗಿದ್ದಾರೆ. ಹುಲಿಯ ಚಲನವಲನ ಗಮನಿಸಲು 200ಕ್ಕೂ ಹೆಚ್ಚು ಕಡೆ ಕ್ಯಾಮೆರಾ ಅಳವಡಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.