ಮಂಡ್ಯ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ ಆರೋಪದ ಮೇಲೆ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಜಿಲ್ಲಾ ಘಟಕ ಅಧ್ಯಕ್ಷ ಸಯ್ಯದ್ ಇರ್ಫಾನ್ ಅವರನ್ನು ಪೂರ್ವ ಠಾಣೆ ಪೊಲೀಸರು ಮಂಗಳವಾರ ನಸುಕಿನಲ್ಲಿ ಬಂಧಿಸಿದ್ದಾರೆ. ಸಯ್ಯದ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾದ ಇತರ ಮೂವರು ಸದಸ್ಯರೂ ಬಂಧನಕ್ಕೊಳಗಾಗಿದ್ದಾರೆ.
ಗುತ್ತಲು ಬಡಾವಣೆಯ ಸಯ್ಯದ್ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ತಕ್ಷಣ ಅವರನ್ನು ಬಂಧಿಸಿದರು. ನಸುಕಿನಲ್ಲೇ ತಹಶೀಲ್ದಾರ್ ನಿವಾಸದಲ್ಲಿ ಹಾಜರುಪಡಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಯಿತು.
ಮತ್ತೆ ಮೂವರ ಬಂಧನ: ಸಯ್ಯದ್ ಇರ್ಫಾನ್ ಬಂಧನ ಖಂಡಸಿ ಪ್ರತಿಭಟನೆ ನಡೆಸಲು ಮುಂದಾದ ದಾದಾ ಪೀರ್, ಮುಖ್ತಾರ್, ಮೊಹಮ್ಮದ್ ಇಬ್ರಾಹಿಂ ಅವರನ್ನೂ ಪೊಲೀಸರು ವಶಕ್ಕೆ ಪಡೆದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿಸಿ ತಹಶೀಲ್ದಾರ್ ಮುಂದೆ ಹಾಜರುಪಡಿಸಿದರು. ನಂತರ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.