ADVERTISEMENT

ಕ್ವಾರಂಟೈನ್‌ನಲ್ಲಿರಲು ಶಿಫಾರಸು: ಮಾಹಿತಿ ಹಂಚಿಕೊಂಡ ನಾಲ್ವರು ಸಚಿವರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2020, 2:47 IST
Last Updated 30 ಏಪ್ರಿಲ್ 2020, 2:47 IST
ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್
ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್   

ಬೆಂಗಳೂರು: ಕನ್ನಡ ಸುದ್ದಿವಾಹಿನಿಯೊಂದರ ಕ್ಯಾಮೆರಾಮನ್‌ಗೆ ಕೋವಿಡ್‌–19ಇರುವುದು ಇತ್ತೀಚೆಗೆ ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಕ್ಯಾಮರಾಮನ್‌ ಸಂಪರ್ಕಕ್ಕೆ ಬಂದಿದ್ದ ನಾಲ್ವರು ಸಚಿವರನ್ನು 14 ದಿನಗಳ ಕಾಲ ಪ್ರತ್ಯೇಕ ವಾಸದಲ್ಲಿರುವಂತೆಶಿಫಾರಸು ಮಾಡಲಾಗಿದೆ.

ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಪ್ರತ್ಯೇಕ ವಾಸದಲ್ಲಿರಲು ಸೂಚಿಸಲಾಗಿದೆ.

ಸಚಿವರು ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ಅಶ್ವತ್ಥನಾರಾಯಣ ಅವರು, ‘ಕೋವಿಡ್-19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ. ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

‘ಕೋವಿಡ್-19 ಪಾಸಿಟಿವ್ ಬಂದಿರುವ ಟಿವಿ ಪತ್ರಕರ್ತರ ಜೊತೆ ನಾನು ಕೂಡ ಸಂಪರ್ಕಕ್ಕೆ ಬಂದಿರುವ ವಿಷಯ ಗೊತ್ತಾದ ಹಿನ್ನಲೆಯಲ್ಲಿ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ, ನೆಗೆಟಿವ್ ಬಂದಿದೆ. ಹಾಗಿದ್ದರೂ, ಮುನ್ನೆಚ್ಚರಿಕೆಯಿಂದ 7 ದಿನ ನನ್ನ ಮನೆಯಲ್ಲೆ ಕ್ವಾರಂಟೈನ್‌ನಲ್ಲಿರಲು ನಿರ್ಧರಿಸಿದ್ದೇನೆ, ಅಲ್ಲಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ’ ಎಂದು ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

‘ಕನ್ನಡ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿರುವ ಕ್ಯಾಮರಾಮನ್‌ಗೆ ಕೋವಿಡ್‌–19 ಇರುವುದು ಇತ್ತೀಚೆಗೆ ದೃಢಪಟ್ಟಿದೆ. ನನ್ನ ಸಭೆಗಳ ಸಂದರ್ಭದಲ್ಲಿ ನಾನು ಅವರೊಂದಿಗೆ ನಿಕಟ ಸಂವಹನ ನಡೆಸದ ಹೊರತಾಗಿಯೂ, ಏಪ್ರಿಲ್‌ 28ರಂದು ಪರೀಕ್ಷೆಗೆ ಒಳಗಾಗಿದ್ದೇನೆ. ಪರೀಕ್ಷೆಯಲ್ಲಿ ಕೊರೊನಾವೈರಸ್‌ ನೆಗೆಟಿವ್‌ ಬಂದಿರುವುದನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ’ ಎಂದು ತಿಳಿಸಿ, ವರದಿ ಪ್ರತಿಯನ್ನೂ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.