ADVERTISEMENT

‘ಫ್ರೀ ಕಾಶ್ಮೀರ’ ಫಲಕ ವಕಾಲತ್ತಿಗೆ ತಕರಾರು

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 20:00 IST
Last Updated 13 ಜನವರಿ 2020, 20:00 IST

ಮೈಸೂರು: ‘ಫ್ರೀ ಕಾಶ್ಮೀರ’ ಫಲಕ ಹಿಡಿದು ವಿವಾದಕ್ಕೆ ಒಳಗಾಗಿರುವ ಬಿ.ನಳಿನಿ ಪರ ವಕಾಲತ್ತು ವಹಿಸಿದ್ದ ವಕೀಲ ಪೃಥ್ವಿ, ವೈಯಕ್ತಿಕ ಕಾರಣ ನೀಡಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ಯಾರೂ ವಕಾಲತ್ತು ವಹಿಸಬಾರದೆಂದು ನಿರ್ಣಯ ಕೈಗೊಳ್ಳಲು ವಕೀಲರ ಸಂಘಕ್ಕೆ ಕೆಲವರು ಮನವಿ ಮಾಡಿದ್ದಾರೆ. ಈ ಮನವಿಯಲ್ಲಿ ಯಾರೊಬ್ಬರ ಸಹಿ ಇರದೆ, ಸರ್ವ ಸದಸ್ಯರು ಎಂದಷ್ಟೇ ಇದೆ.

‘ಇಂಥ ಮನವಿ ಬಂದಿರುವುದು ನಿಜ. ಈ ಕುರಿತು ಚರ್ಚಿಸಲು ಇನ್ನೂ ಸರ್ವ ಸದಸ್ಯರ ಸಭೆ ಕರೆದಿಲ್ಲ. ನಳಿನಿ ಪರ ವಕಾಲತ್ತು ವಹಿಸಿದ್ದ ವಕೀಲರು ವೈಯಕ್ತಿಕ ಕಾರಣ ನೀಡಿ ಹಿಂದೆ ಸರಿದಿರುವುದಾಗಿ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದ್ದಾರೆ’ ಎಂದು ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.