ರಾಮನಗರ: ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ತಮ್ಮ ಆಪ್ತ ಕಾರ್ಯದರ್ಶಿ ರಮೇಶ್ ಅವರ ತಿಥಿ ಕಾರ್ಯದಲ್ಲಿ ಶಾಸಕ ಜಿ. ಪರಮೇಶ್ವರ್ ಭಾಗಿಯಾದರು.
ರಮೇಶ್ ಮಕ್ಕಳಾದ ಮೋಹಿತ್ ಹಾಗೂ ಶ್ರೇಯಾರನ್ನು ತಬ್ಬಿಕೊಂಡು ಸಂತೈಸಿದ ಶಾಸಕರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ‘ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಸ್ಥಳೀಯ ನಗರ ಸಂಸ್ಥೆ ಚುನಾವಣೆ ಮುಂದೂಡುವುದು ಸರಿಯಲ್ಲ. ಸರ್ಕಾರ ಹಾಗೂ ಚುನಾವಣಾ ಆಯೋಗ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು’ಎಂದು ಆಗ್ರಹಿಸಿದರು.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.