ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ‘ಗಂಧದಗುಡಿ’ ಹೆಸರು ಮುದ್ರಿಸುವ ಮೂಲಕ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವಿಶೇಷ ಗೌರವ ಸಲ್ಲಿಸಿದೆ.
ಈ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಕೆಎಂಎಫ್ ರಾಯಭಾರಿ ಯಾಗಿದ್ದರು. ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ಗಳ ಮೇಲೆ ‘ಗಂಧದಗುಡಿ- ಜರ್ನಿ ಆಫ್ ಎ ಟ್ರೂ ಹೀರೊ’ ಸಿನಿಮಾ ಶೀರ್ಷಿಕೆಯನ್ನು ಮುದ್ರಿಸಿ ಪುನೀತ್ ಅವರಿಗೆ ಗೌರವ ಸಲ್ಲಿಸುತ್ತಿರುವುದಾಗಿ ಕೆಎಂಎಫ್ ತಿಳಿಸಿದೆ.
ಶುಕ್ರವಾರದಿಂದಲೇ ಕೆಲವು ಹಾಲಿನ ಪ್ಯಾಕೆಟ್ಗಳ ಮೇಲೆ ಗಂಧದ ಗುಡಿ ಎಂದು ಮುದ್ರಿಸುವುದನ್ನು ಆರಂಭಿಸಲಾಗಿದೆ. ಶನಿವಾರದಿಂದ ಎಲ್ಲ ಪ್ಯಾಕೆಟ್ಗಳ ಮೇಲೆ ಮುದ್ರಿಸಲಾಗುವುದು. ಎಲ್ಲ ಹಾಲು ಒಕ್ಕೂಟಗಳು ಸಹ ಈ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.