ADVERTISEMENT

ಗೋವಾದಲ್ಲಿ ಗಣೇಶ್‌: ಶೀಘ್ರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 19:24 IST
Last Updated 2 ಫೆಬ್ರುವರಿ 2019, 19:24 IST
ಎಂ.ಬಿ.ಪಾಟೀಲ್
ಎಂ.ಬಿ.ಪಾಟೀಲ್   

ಮಂಡ್ಯ: ‘ಶಾಸಕ ಗಣೇಶ್ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರ ಬಂಧಿಸಲಾಗುವುದು. ಐಪಿಸಿ ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಇಲ್ಲಿ ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಶಾಸಕ ಗಣೇಶ್ ಬಂಧನಕ್ಕೆ ರಾಜ್ಯದ ಪೊಲೀಸ್ ಪಡೆ ಬೆನ್ನು ಹತ್ತಿದೆ. ಮುಂಬೈನಲ್ಲಿ ಹಿಡಿಯಲು ಪ್ರಯತ್ನ ಮಾಡಲಾಗಿತ್ತು. ಆಗ ಮೊಬೈಲ್ ಸ್ವಿಚ್ಡ್‌ ಆಫ್ ಮಾಡಿ ಯಾರ ಕೈಗೂ ಸಿಗದೆ ಪರಾರಿಯಾಗಿದ್ದಾರೆ. ಗೋವಾದಲ್ಲಿ ಇರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಬಂಧಿಸಲಿದ್ದಾರೆ. ಈ ಕುರಿತು ರಾಮನಗರ ತನಿಖಾಧಿಕಾರಿ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದೇನೆ' ಎಂದರು.

ಉಕ್ಕಿನ ಸೇತುವೆ: ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ವಿವಿಧ ದೇಶಗಳ ಉಕ್ಕಿನ ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದು, ತಜ್ಞರಿಂದ ತಾಂತ್ರಿಕ ಸಲಹೆ ಮೇರೆಗೆ ಸೇತುವೆ ನಿರ್ಮಾಣಕ್ಕೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.