ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡನನ್ನು ಸಿಐಡಿ ಪೊಲೀಸರು ಚಡಚಣ ತಾಲ್ಲೂಕಿನ ಕೆರೂರಿನ ಆತನ ಮನೆಯಲ್ಲೇ ಗುರುವಾರ ನಸುಕಿನಲ್ಲಿ ಬಂಧಿಸಿದ್ದಾರೆ.
ಇಂಡಿ ಜೆಎಂಎಫ್ಸಿ ನ್ಯಾಯಾಧೀಶರು ಆರೋಪಿಯನ್ನು 7 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ ಹಳ್ಳೂರ ಸೇರಿ 9 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
*
ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದೆ. ತನಿಖೆ ನಡೆಸುತ್ತಿದ್ದೇವೆ. ಅಗತ್ಯ ಬಿದ್ದರೇ ಮತ್ತಷ್ಟು ಜನರನ್ನು ಬಂಧಿಸಲಾಗುವುದು.
–ಎಚ್.ಡಿ.ಆನಂದಕುಮಾರ್, ಸಿಐಡಿ ಎಸ್ಪಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.