ಬೆಂಗಳೂರು: ‘ಗೋಕರ್ಣ ಮಹಾಬಲೇಶ್ವರ ದೇವಾಲಯ ಮುಜರಾಯಿ ಇಲಾಖೆಯ ವಶದಲ್ಲೇ ಮುಂದುವರಿಯಲಿದೆ’ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಮುಜರಾಯಿ ಇಲಾಖೆಯ ಆಯುಕ್ತರಿಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬುಧವಾರ (ಅ.10) ಪತ್ರ ಬರೆದಿದ್ದಾರೆ.
‘ಕೊಲ್ಲೂರು ಮೂಕಾಂಬಿಕಾ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಎಚ್. ಹಾಲಪ್ಪ ಅವರಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೊಣೆಯನ್ನು ಸುಪ್ರೀಂ ಕೋರ್ಟ್ ಆದೇಶಕ್ಕೂ ಮೊದಲೇ ನೀಡಲಾಗಿದೆ. ಹೀಗಾಗಿ, ಹಾಲಪ್ಪ ಅವರೇ ಗೋಕರ್ಣ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಮುಂದುವರಿಯಬೇಕಾಗುತ್ತದೆ’ ಎಂಬ ಅಡ್ವೊಕೇಟ್ ಜನರಲ್ ಅಭಿಪ್ರಾಯವನ್ನು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.