ADVERTISEMENT

ರಾಜಭವನಕ್ಕೆ ಬಂದ ನೂತನ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌: ಇಂದು ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 20:47 IST
Last Updated 10 ಜುಲೈ 2021, 20:47 IST
ಥಾವರಚಂದ್‌ ಗೆಹಲೋತ್‌ ಮತ್ತು ಅವರ ಪತ್ನಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು
ಥಾವರಚಂದ್‌ ಗೆಹಲೋತ್‌ ಮತ್ತು ಅವರ ಪತ್ನಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು   

ಬೆಂಗಳೂರು: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಥಾವರಚಂದ್‌ ಗೆಹಲೋತ್‌ ಅವರು ನಗರಕ್ಕೆ ಶನಿವಾರ ಬಂದರು.

ರಾಜ್ಯದ 19ನೇ ರಾಜ್ಯಪಾಲರಾಗಿ ಗೆಹಲೋತ್‌ ಅವರು ಭಾನುವಾರ (ಜುಲೈ11) ಬೆಳಿಗ್ಗೆ 11.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದೆಹಲಿಯಿಂದ ಕುಟುಂಬ ಸದಸ್ಯರ ಜೊತೆಗೆ ಶನಿವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗೆಹಲೋತ್‌ ಅವರನ್ನು ಕಂದಾಯ ಸಚಿವ ಆರ್‌. ಅಶೋಕ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮತ್ತು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸ್ವಾಗತಿಸಿದರು. ರಾಜಭವನದಲ್ಲಿ ಗೆಹಲೋತ್‌ ಮತ್ತು ಅವರ ಪತ್ನಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.