ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸಚಿವ ಎಚ್.ಡಿ.ರೇವಣ್ಣ ಬುಧವಾರ ತಿಳಿಸಿದರು.
ಬೆಂಗಳೂರು ಶಾಸಕರ ಆಡಳಿತದಲ್ಲೂಯಾವುದೇ ಹಸ್ತಕ್ಷೇಪ ಮಾಡಿಲ್ಲ, ಕ್ಷೇತ್ರಗಳ ಅನುದಾನ ವಿಚಾರದಲ್ಲೂ ತಾರತಮ್ಯ ಮಾಡಿಲ್ಲ, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ನಾನು ಮೂಗು ತೂರಿಸಿಲ್ಲ, ನನ್ನ ಇಲಾಖೆಬಿಟ್ಟು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ರೇವಣ್ಣ ತಿಳಿಸಿದರು.
ರೇವಣ್ಣ ಅವರು ನಿಂಬೆ ಹಣ್ಣು ಇಟ್ಟುಕೊಂಡಿರುತ್ತಾರೆ ಎಂಬ ಪ್ರಶ್ನೆಗೆ ‘ನಾನು ಯಾವುದೇ ನಿಂಬೆ ಹಣ್ಣು ಇಟ್ಟುಕೊಂಡಿಲ್ಲ‘ಎಂದು ಸ್ಪಷ್ಟಪಡಿಸಿದರು. ಅತೃಪ್ತ ಶಾಸಕರು ಮುಂಬೈಗೆ ಹೋದ ಮೇಲೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ಅವರು ಇಲ್ಲೆ ಇದ್ದಾಗ ಯಾಕೆ ಹೇಳಲಿಲ್ಲ, ಇವರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ ಎಂದು ರೇವಣ್ಣ ಹೇಳಿದರು.
ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಅವರಿಗೆ ನಾವು ಕೆಟ್ಟದನ್ನು ಮಾಡಿಲ್ಲ, ಅವರ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.