ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿಯಾಗಿ 1.14 ಲಕ್ಷ ಟನ್ ರಾಗಿ ಖರೀದಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರಂಭದಲ್ಲಿ 2.1 ಲಕ್ಷ ಟನ್ ರಾಗಿ ಖರೀದಿಸಲಾಗಿತ್ತು. ಇನ್ನೂ ಕೆಲವು ಜಿಲ್ಲೆಗಳ ರೈತರಿಂದ ಹೆಚ್ಚುವರಿ ರಾಗಿ ಖರೀದಿಗೆ ಬೇಡಿಕೆ ಬಂದಿತ್ತು ಎಂದು ಹೇಳಿದರು.
1.14 ಲಕ್ಷ ಟನ್ ರಾಗಿ ಖರೀದಿಗೆ ₹482ಕೋಟಿ ಬೇಕಾಗುತ್ತದೆ ಎಂದೂ ಬೊಮ್ಮಾಯಿ ತಿಳಿಸಿದರು.
ತನಿಖೆಗೆ ಸಿದ್ಧ: ಮಠದ ಕೆಲಸಕ್ಕೂ ಶೇ 40 ರಷ್ಟು ಕಮಿಷನ್ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಸ್ವಾಮೀಜಿ ಯಾರಿಗೆ, ಯಾವಾಗ ಮತ್ತು ಯಾವ ಕಾರಣಕ್ಕೆ ಕಮಿಷನ್ ಕೊಟ್ಟಿದ್ದಾರೆ ಎಂಬ ವಿವರ ನೀಡಿದರೆ ತನಿಖೆ ನಡೆಸುವುದಾಗಿ ತಿಳಿಸಿದರು.
ದಿಂಗಾಲೇಶ್ವರರು ಮಹಾತ್ಮರು, ಮಹಾನ್ ತಪಸ್ವಿಗಳು ಹೀಗಾಗಿ ಅವರು ಕಮಿಷನ್ ನೀಡಿದ ಸಂಪೂರ್ಣ ವಿವರ ನೀಡಲಿ. ಆಳವಾದ ತನಿಖೆ ನಡೆಸುತ್ತೇವೆ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.