ADVERTISEMENT

ಮಳೆಯಿಂದ ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 9:30 IST
Last Updated 10 ಅಕ್ಟೋಬರ್ 2019, 9:30 IST
   

ಬೆಂಗಳೂರು: ಮಳೆ ಮತ್ತು ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರ ಗುರುವಾರ ಪರಿಹಾರ ಘೋಷಿಸಿದೆ.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಕಂದಾಯ ಸಚಿವ ಆರ್‌.ಅಶೋಕ್,ಶೇ 25ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದರೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಶೇ 15ರಿಂದ 25ರಷ್ಟುಹಾನಿಯಾಗಿದ್ದರೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಕಟಿಸಿದರು.

ADVERTISEMENT

ಮಳೆ ಮತ್ತು ನೆರೆಯಿಂದಾಗಿಶೇ 25ರಿಂದ ಶೇ 75ರಷ್ಟುಪ್ರಮಾಣದಲ್ಲಿ ಮನೆಗಳು ಹಾಳಾಗಿದ್ದರೆ₹1 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಈ ಹಿಂದೆ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.