ADVERTISEMENT

ಒತ್ತಡ ತಂತ್ರಕ್ಕೆ ಸರ್ಕಾರ ಬಗ್ಗಲ್ಲ: ಸಚಿವ ಸಿ.ಟಿ. ರವಿ

ದಸರಾ 8ರಂದು ಉನ್ನತ ಮಟ್ಟದ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 7:56 IST
Last Updated 5 ಸೆಪ್ಟೆಂಬರ್ 2020, 7:56 IST
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ   

ಚಿಕ್ಕಮಗಳೂರು: ‘ಸರ್ಕಾರವು ಡ್ರಗ್‌ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖಾ ತಂಡದ ಮೇಲೆ ಒತ್ತಡ ಹೇರುವ, ವಿಷಯಾಂತರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದಕ್ಕೆ ಸರ್ಕಾರ ಬಗ್ಗಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆಶುಕ್ರವಾರ ಮಾತನಾಡಿದ ಅವರು, ‘ಈ ಮಾಫಿಯಾಕ್ಕೆ ಹೊರ ರಾಜ್ಯ, ವಿದೇಶಗಳ ನಂಟು ಇದೆ. ಕೆಲವೆಡೆ ಭಯೋತ್ಪಾದಕರು, ರಾಜಕಾರಣಿಗಳು, ಸಿನಿಮಾ ನಟರ ಜತೆ ತಳಕು ಹಾಕಿಕೊಂಡಿರುವುದು ಮೇಲ್ನೋಟಕ್ಕೆಕಂಡುಬಂದಿದೆ. ಯುವಜನರನ್ನು ಪಿಡುಗಿನಿಂದ ಮುಕ್ತಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ’ ಎಂದು ಹೇಳಿದರು.

‘ದಸರಾಕ್ಕೆ ಸಂಬಂಧಿಸಿದಂತೆ ಇದೇ 8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ದಸರಾ ರೂಪುರೇಷೆ ಕುರಿತು ಚರ್ಚಿಸಲಾಗುವುದು. ನಂತರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜತೆಗೂಡಿ ಸಮಗ್ರ ಯೋಜನೆ ರೂಪಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.