ಧಾರವಾಡ: ‘ಕಣ್ಣು, ಕಿವಿ ಹಾಗೂ ಹೃದಯವಿಲ್ಲದ ರಾಜ್ಯ ಸರ್ಕಾರವು ಕಳೆದ ವರ್ಷದ ನೆರೆ ಪರಿಹಾರವನ್ನೇ ಬಿಡುಗಡೆ ಮಾಡಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ನಗರಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಅವರ ಕಷ್ಟಗಳು ಏನು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಭೇಟಿ ಮಾಡಿ ವಿಚಾರಿಸಬೇಕಿತ್ತು. ಆದರೆ ಆಲ್ಲೆಲ್ಲೋ ಕುಳಿತು ಮಾತನಾಡುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಈ ವರ್ಷ ದೇವರೇ ಗತಿ’ ಎಂದು ಕೈಚೆಲ್ಲಿದ್ದಾರೆ. ಹೀಗಾದರೆ ದೇಶದ ಜನರ ಪಾಡೇನು?’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.