ADVERTISEMENT

ಇದು ಕಣ್ಣು, ಕಿವಿ, ಹೃದಯ ಇಲ್ಲದ ಸರ್ಕಾರ: ಡಿಕೆಶಿ ಕಿಡಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 16:28 IST
Last Updated 3 ಅಕ್ಟೋಬರ್ 2020, 16:28 IST
ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌   

ಧಾರವಾಡ: ‘ಕಣ್ಣು, ಕಿವಿ ಹಾಗೂ ಹೃದಯವಿಲ್ಲದ ರಾಜ್ಯ ಸರ್ಕಾರವು ಕಳೆದ ವರ್ಷದ ನೆರೆ ಪರಿಹಾರವನ್ನೇ ಬಿಡುಗಡೆ ಮಾಡಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ನಗರಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಅವರ ಕಷ್ಟಗಳು ಏನು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಭೇಟಿ ಮಾಡಿ ವಿಚಾರಿಸಬೇಕಿತ್ತು. ಆದರೆ ಆಲ್ಲೆಲ್ಲೋ ಕುಳಿತು ಮಾತನಾಡುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಈ ವರ್ಷ ದೇವರೇ ಗತಿ’ ಎಂದು ಕೈಚೆಲ್ಲಿದ್ದಾರೆ. ಹೀಗಾದರೆ ದೇಶದ ಜನರ ಪಾಡೇನು?’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT