ಬೆಂಗಳೂರು:ರಾಜ್ಯ ಸರ್ಕಾರಕ್ಕೆ ಜಾನುವಾರುಗಳ ಮೇಲೆ ಪ್ರೀತಿ ಹೆಚ್ಚಾಗಿದ್ದು, ಬೇಸಿಗೆ ಸಮಯದಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆ ನಡುವೆ ಹೊಲದಲ್ಲಿ ದುಡಿಸಿಕೊಳ್ಳುವಂತಿಲ್ಲ ಎಂದು ಆದೇಶಿಸಿದೆ.
ಜನರಿಗಷ್ಟೇ ಬೇಸಿಗೆ ಬಿಸಿಲು ತಟ್ಟುವುದಿಲ್ಲ. ಎತ್ತುಗಳೂ ಇದರ ಪರಿಣಾಮ ಎದುರಿಸುತ್ತವೆ. ಆ ಸಮಯದಲ್ಲಿ ದುಡಿಯುವುದು ಕಷ್ಟಕರ. ಹಾಗಾಗಿ ಮಧ್ಯಾಹ್ನದ ಸಮಯದಲ್ಲಿ ರೈತರು, ಉಳುಮೆಗೆ ಎತ್ತುಗಳನ್ನು ಬಳಸಿಕೊಳ್ಳುವಂತಿಲ್ಲ. ಒಂದು ವೇಳೆ ನಿಯಮ ಮೀರಿದರೆ ಕ್ರಮ ಕೊಳ್ಳಲಾಗುವುದು ಎಂದು ಒಳಾಡಳಿತ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಎಚ್ಚರಿಸಿದೆ.
ಆಯಾ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಮೂಲಕ ಈ ನಿಮಯ ಜಾರಿ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.