ರಾಜ್ಯಾದ್ಯಂತ ಬುಧವಾರ ಶಾಲೆಗಳು ಆರಂಭವಾಗಿದ್ದು, ಮೊದಲ ದಿನವೇ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಹೊಸ ಹುರುಪಿನೊಂದಿಗೆ ತರಗತಿಗೆ ಹಾಜರಾದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟುವ ಮೂಲಕ ಶಿಕ್ಷಕರು ಮಕ್ಕಳನ್ನು ಸಂಭ್ರಮದಿಂದ ಮಕ್ಕಳನ್ನು ಬರಮಾಡಿಕೊಂಡರು. ಬಲೂನ್, ಗುಲಾಬಿ ಹೂ, ಸಮವಸ್ತ್ರ ವಿತರಣೆ, ಪುಸ್ತಕ ವಿತರಣೆ ಹೀಗೆ ನಾನಾ ಬಗೆಯಲ್ಲಿ ಮಕ್ಕಳನ್ನು ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.