ADVERTISEMENT

ದೇವಸ್ಥಾನ ಅನುದಾನ ದುರ್ಬಳಕೆ ಕುರಿತು ತನಿಖೆ- ಸಚಿವ ರಾಮಲಿಂಗಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 16:14 IST
Last Updated 4 ಡಿಸೆಂಬರ್ 2023, 16:14 IST
<div class="paragraphs"><p>ರಾಮಲಿಂಗಾ ರೆಡ್ಡಿ</p></div>

ರಾಮಲಿಂಗಾ ರೆಡ್ಡಿ

   

ವಿಧಾನಸಭೆ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆ ಆರೋಪ ಕುರಿತು ತನಿಖೆ ನಡೆಸಲಾಗುವುದು’ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು.

ಜೆಡಿಎಸ್‌ನ ಕರೆಮ್ಮ ಜಿ. ನಾಯಕ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಅವರು, ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಬಿಡುಗಡೆ ಮಾಡಿರುವ ಅನುದಾನದ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ನಿರ್ದಿಷ್ಟ ಪ್ರಕರಣಗಳಿದ್ದರೆ ದೂರು ಸಲ್ಲಿಸಬಹುದು. ಆ ಕುರಿತು ತನಿಖೆ ನಡೆಸುತ್ತೇವೆ’ ಎಂದರು.

ADVERTISEMENT

‘ದೇವದುರ್ಗ ತಾಲ್ಲೂಕಿನ ಹಲವು ದೇವಸ್ಥಾನಗಳ ಅಭಿವೃದ್ಧಿ, ದುರಸ್ತಿಗೆ ಕಳೆದ ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆ ಆಗಿದೆ. ಹಲವೆಡೆ ಕಾಮಗಾರಿಗಳನ್ನು ನಡೆಸದೇ ಬಿಲ್‌ ಪಾವತಿಸಲಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗಿದ್ದಾರೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.