ADVERTISEMENT

ಬೆಳಗಾವಿ: ರಿವಾಲ್ವಾರ್ ತಂದಿದ್ದ ಮತಗಟ್ಟೆ ಅಧಿಕಾರಿ ಬದಲು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 4:30 IST
Last Updated 22 ಡಿಸೆಂಬರ್ 2020, 4:30 IST
ರಿವಾಲ್ವರ್ ತಂದಿದ್ದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿ
ರಿವಾಲ್ವರ್ ತಂದಿದ್ದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿ   

ಬೆಳಗಾವಿ: ತಾಲ್ಲೂಕಿನ ದೇಸೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಯು ತನ್ನ ಜೊತೆಯಲ್ಲಿ ರಿವಾಲ್ವರ್ ತಂದಿದ್ದು ಸೋಮವಾರ ಪತ್ತೆಯಾಗಿದೆ.

ಸುಲೇಮಾನ್ ಸನದಿ ಎನ್ನುವವರು ಪಿಸ್ತೂಲ್ ತಂದಿದ್ದವರು.

ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಇರುವುದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರಕ್ಕೆ ತೆರಳಿದ ಹಿರಿಯ ಪೋಲಿಸ್ ಅಧಿಕಾರಿಗಳು ಪಿಸ್ತೂಲ್ ನಲ್ಲಿ ತುಂಬಲಾಗಿದ್ದ ಗುಂಡುಗಳನ್ನು ಹೊರಗೆ ತೆಗೆಯುವಂತೆ ತಿಳಿಸಿದ್ದಾರೆ.

ADVERTISEMENT

ಪಿಸ್ತೂಲ್ ಅನ್ನು ಕರ್ತವ್ಯದ ಸಮಯದಲ್ಲಿ ತನ್ನೊಂದಿಗೆ ತರಲು ಕಾರಣವೇನು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿಯನ್ನು ಪರಿಶೀಲಿಸಲಾಯಿತು. ಕ್ರೇಜ್‌ಗಾಗಿ ಪಿಸ್ತೂಲ್ ತಂದಿದ್ದೆ ಎಂದು ಅವರು ತಿಳಿಸಿದರು. ಕೊನೆಗೆ ಅವರನ್ನು ಆ ಕೆಲಸದಿಂದ ಬಿಡುಗಡೆ ಮಾಡಿ ಬೇರೆಯವರನ್ನು ನಿಯೋಜಿಸಲಾಗಿದೆ. ರಿವಾಲ್ವಾರ್ ಹೊಂದಲು ಅವರು ಪರವಾನಗಿ ಹೊಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.