ಬೆಂಗಳೂರು: ‘ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಿಸುವ ಸಂಬಂಧ ಅಕ್ಟೋಬರ್ ಮೊದಲ ವಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಗೆ ತಿಳಿಸಿದೆ.
ಈ ಕುರಿತು ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಲಿಖಿತ ಹೇಳಿಕೆ ಮಂಡಿಸಿದರು.
‘ಮೀಸಲಾತಿ ಅವಧಿಯನ್ನು 10 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರಿವಾಜ್ಞೆ ಪ್ರಕಾರ ಮೀಸಲಾತಿ ಮರು ನಿಗದಿಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಜುಲೈ 25ರೊಳಗೆ ಪೂರ್ಣಗೊಳಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗುವುದು. ಸೆಪ್ಟೆಂಬರ್ 10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ’ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.