ಹುನಗುಂದ (ಬಾಗಲಕೋಟೆ ಜಿಲ್ಲೆ): ತಾಲ್ಲೂಕಿನ ಅಮರಾವತಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿಯೇ ಸದಸ್ಯರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ರಾಮವಾಡಗಿ ಗ್ರಾಮವನ್ನು ಪ್ರತಿನಿಧಿಸುತ್ತಿದ್ದ ಸದಸ್ಯ ಬಾಲಪ್ಪ ಚೌಡಪ್ಪ ಚಲವಾದಿ (46) ಮೃತಪಟ್ಟವರು.
ಸದಸ್ಯರ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ಮುಗಿದ ನಂತರ ಅಧಿಕೃತವಾಗಿ ಸಭೆ ಆರಂಭವಾಗಿತ್ತು. ಊರಿನಲ್ಲಿ ಆಗಬೇಕಾದ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಪಟ್ಟಿಯೊಂದಿಗೆ ಚರ್ಚಿಸುತ್ತಿದ್ದ ಬಾಲಪ್ಪ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಅವರನ್ನು ಇಳಕಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆದಲ್ಲಿಯೇ ಸಾವನ್ನಪ್ಪಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.