ಬೆಂಗಳೂರು: ಗ್ರಾಮ ವಾಸ್ತವ್ಯ ನಿಗದಿಯಾಗಿರುವಯಾದಗಿರಿ ಜಿಲ್ಲೆಯ ಗುರುಮಿಠಕಲ್ಗೆ ತೆರಳಲು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ ಸಂಜೆ ಬೆಂಗಳೂರಿನಲ್ಲಿ ರೈಲು ಏರಿದರು.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾತ್ರಿ 7.30ಕ್ಕೆ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹತ್ತಿದ ಸಿಎಂ ಎಚ್ಡಿಕೆ, ಶುಕ್ರವಾರ 3.48ರ ನಸುಕಿನಲ್ಲಿ ಯಾದಗಿರಿ ರೈಲ್ವೆ ನಿಲ್ದಾಣ ತಲುಪಲಿದ್ದಾರೆ. ನಂತರ ರಸ್ತೆ ಮೂಲಕ ಗ್ರಾಮ ವಾಸ್ತವ್ಯ ನಿಗದಿಯಾಗಿರುವ ಚಂಡರಕಿ ಕಡೆಗೆ ಅವರು ಪ್ರಯಾಣ ಬೆಳಸಲಿದ್ದಾರೆ. ಬೆಳಗ್ಗೆ 7.30ಕ್ಕೆಚಂಡರಕಿ ತಲುಪಲಿದ್ದು, ಬೆಳಗ್ಗೆ 10 ಗಂಟೆಗೆ ಅಲ್ಲಿನ ಸರ್ಕಾರಿಶಾಲೆಯಲ್ಲಿ ಜನತಾ ದರ್ಶನ ಆರಂಭವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.