ಬೆಂಗಳೂರು: ರಾಜ್ಯಕ್ಕೆ ಜಿಎಸ್ಟಿ ತೆರಿಗೆ ಪಾಲು ಸಿಗದೇ ಇರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ‘ಜಿಎಸ್ಟಿ ರಾಜ್ಯದ ಪಾಲಿನ ಹಕ್ಕು, ಅದು ಭಿಕ್ಷೆ ಅಲ್ಲ’ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಅಂತಿದೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ’ ಎಂದಿದ್ದಾರೆ.
‘ಕರ್ನಾಟಕದಿಂದ ಆಯ್ಕೆಯಾದ 25 ಬಿಜೆಪಿ ಸಂಸದರೇ ಈಗ ಎಲ್ಲಿದ್ದೀರಿ. ಅಂಜುಬುರುಕತನ
ಬಿಟ್ಟು ಕನಿಷ್ಠ ಪ್ರಧಾನಿ ಬಳಿ ಮಾತನಾಡಿ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.