ADVERTISEMENT

ಎಡಗೈ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಬೇಕು-ಎಚ್. ಆಂಜನೇಯ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:00 IST
Last Updated 18 ಫೆಬ್ರುವರಿ 2021, 8:00 IST
ಮಾಜಿ ಸಚಿವ ಎಚ್.ಆಂಜನೇಯ
ಮಾಜಿ ಸಚಿವ ಎಚ್.ಆಂಜನೇಯ   

ಬೆಂಗಳೂರು: 'ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿ ಬಹಿರಂಗ ಪಡಿಸಬೇಕು‌. ಸದಾಶಿವ ಆಯೋಗ ವರದಿ ಜಾರಿಯಾಗಬೇಕು. ಆ ಮೂಲಕ, ಎಡಗೈ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಬೇಕು' ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್.ಆಂಜನೇಯ ಆಗ್ರಹಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ಕಾಂತರಾಜು ವರದಿ ಹಾಗೂ ಸದಾಶಿವ ಆಯೋಗದ ವರದಿ ಎರಡೂ ಜಾರಿಯಾಗಬೇಕು‌. ಸದ್ಯಕ್ಕೆ ದಲಿತ ಸಮುದಾಯದ ಯಾವುದೆ ಸಮಾವೇಶ ಇಲ್ಲ . ಆ ಶಕ್ತಿ ನಮಗಿಲ್ಲ' ಎಂದರು.

'ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೇಲ್ಜಾತಿಯವರಿಗೂ ಶೇ 10 ಮೀಸಲಾತಿ ಘೋಷಣೆ ಮಾಡಿದರು. ಯಾರು ಬಡವರಿದಾರೆ ಅವರಿಗೆ ಅನುಕೂಲ ಸಿಗಲಿ' ಎಂದೂ ಆಂಜನೇಯ ಹೇಳಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.