ಶಿಡ್ಲಘಟ್ಟ: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನರು ಪ್ರಬುದ್ಧರು. ಅವರನ್ನು ಅಷ್ಟು ಸುಲಭವಾಗಿ ಮರುಳು ಮಾಡಲು ಸಾಧ್ಯವಿಲ್ಲ. ಅವರಿಗೆ ಸರಿಯಾದ ತೀರ್ಮಾನ ಮಾಡುವ ರಾಜಕೀಯ ಪ್ರಬುದ್ದತೆ ಇದೆ ಎಂದರು.
ರಾಜ್ಯದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿಲ್ಲ. ಆದರೂ ಪ್ರಧಾನಿ ನಿತ್ಯ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಶಕ್ತಿ ಕುಂದಿದೆ ಎನ್ನುವ ಅರಿವು ಮೋದಿ ಅವರಿಗೆ ಆಗಿದೆ. ಆ ಪಕ್ಷಕ್ಕೆ ಯಾವ ಸ್ಥಿತಿ ಬಂದಿದೆ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.