ಚಿಕ್ಕಮಗಳೂರು:ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತಇಂದು ಬೆಳಿಗ್ಗೆ ಶೃಂಗೇರಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆಪೂರ್ಣ ಕುಂಭ ಸ್ವಾಗತ ದೊರೆಯಿತು.
ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾಕುಮಾರಸ್ವಾಮಿ,ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ,ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಜೊತೆಯಲ್ಲಿದ್ದರು. ಶಾರದಾಂಬೆ ಸನ್ನಿಧಾನದಲ್ಲಿ ಕುಟುಂಬ ಸಮೇತ ಪೂಜಾಕೈಂಕರ್ಯ ಕೈಗೊಂಡಿದ್ದಾರೆ.
ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಆಯುಷ್ಯ ಹೋಮ,ಮೃತ್ಯುಂಜಯ ಜಪ ಹೋಮ, ನವಗ್ರಹ ಹೋಮವನ್ನು ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.