ADVERTISEMENT

ರೈತರಿಗೆ ಸಾಲಮನ್ನಾ ಮಾಹಿತಿ ನೀಡಲು ಎಚ್‌ಡಿಕೆ ಸಹಾಯವಾಣಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 4:05 IST
Last Updated 4 ನವೆಂಬರ್ 2019, 4:05 IST
   

ಬೆಂಗಳೂರು: ಬೆಳೆ ಸಾಲಮನ್ನಾ ಕುರಿತಂತೆ ಅಗತ್ಯ ಮಾಹಿತಿ ನೀಡಲು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ‘ಬೆಳೆ ಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದಾರೆ.

‘ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆ ಸಾಲಮನ್ನಾ ಸಹಾಯವಾಣಿ’ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 91643 05868 ನಂಬರ್‌ಗೆಬೆಳಿಗ್ಗೆ 10 ರಿಂದ 5ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು’ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.