ADVERTISEMENT

ರಾಜಕೀಯವಾಗಿ ನನ್ನನ್ನು ಮುಗಿಸಲು ಯತ್ನ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 18:59 IST
Last Updated 7 ಏಪ್ರಿಲ್ 2019, 18:59 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಉಡುಪಿ: ‘ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್‌ನನ್ನು ಸೋಲಿಸಿ ನನ್ನನ್ನು ರಾಜಕೀಯವಾಗಿ ಮುಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಕಾರ್ಕಳದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾನು ಮಂಡ್ಯಕ್ಕೆ ಹೋಗಿ ಆರು ದಿನಗಳಾಗಿವೆ. ಜೆಡಿಎಸ್‌ ಮಂಡ್ಯದಲ್ಲಿ ಯಾವ ಕುತಂತ್ರ ಮಾಡುತ್ತಿಲ್ಲ. ಕುತಂತ್ರ ಮಾಡುತ್ತಿರುವವರು ಯಾರು ಎಂದು ಗೊತ್ತಿದೆ. ಮಂಡ್ಯ ನಮ್ಮ ಹೃದಯವಿದ್ದಂತೆ, ಅಲ್ಲಿನವರ ನಾಡಿಮಿಡಿತ ಚೆನ್ನಾಗಿ ಗೊತ್ತಿದೆ. ಯಾರ ಡ್ರಾಮಾ ಕೂಡ ನಡೆಯುವುದಿಲ್ಲ’ ಎಂದರು.

ರೈತರು ಸತ್ತಾಗ ಯಾರೂ ಬಂದಿಲ್ಲ. ಕಾಂಪೌಂಡ್ ಕಟ್ಟಿದರೆ ಅದು ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ ಎಂದು ಸುಮಲತಾಗೆ ಅವರು ಟಾಂಗ್ ನೀಡಿದರು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಅಲ್ಲಿ ಹಿನ್ನಡೆಯಾಗಲು ಬಿಡುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.