ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಒಕ್ಕಲಿಗರನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದುಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದರು.
ನಗರದಲ್ಲಿ ಭಾನುವಾರ ನಡೆದ ‘ಸಿದ್ದರಾಮಯ್ಯ ಆಡಳಿತ ಅಂತರಂಗ ಬಹಿರಂಗ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅತಿ ಬಹುಮತದ ಕಾರಣ, ಮೋದಿ ಎಲ್ಲಿ ಸರ್ವಾಧಿಕಾರಿ ಆಗಿಬಿಡುತ್ತಾರೋ ಗೊತ್ತಿಲ್ಲ’ ಎಂದರು.
‘ಒಕ್ಕಲಿಗರು ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ಮಾಡುವುದಕ್ಕಿಂತ ಪ್ರಜಾಪ್ರಭುತ್ವ ಉಳಿಸಲು ಹೋರಾಡಿದ್ದರೆ ಸೂಕ್ತವಾಗಿತ್ತು’ ಎಂದು ಅವರು ಅಭಿಪ್ರಾಯಪಟ್ಟರು.
‘ದುಡ್ಡು, ಜಾತಿ ನೋಡಿ ಅಯೋಗ್ಯರಿಗೆ ಟಿಕೆಟ್ ಕೊಟ್ಟಿದ್ದೀರಿ. ಅವರು ಆಶ್ರಯಕ್ಕಾಗಿ ಬೇರೆಯವರ ಕಾಲು ಹಿಡಿಯಲು ಹೋಗಿದ್ದಾರೆ. ಅಂಥವರನ್ನು ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಗಂಡಸುತನದ ಕೆಲಸ ಮಾಡಿದ್ದಾರೆ’ ಎಂದು ದೊರೆಸ್ವಾಮಿ ಹೇಳಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.