ADVERTISEMENT

ಜಿಂದಾಲ್‌ಗೆ ಭೂಮಿ ಮಾರಾಟ: ಸರ್ಕಾರ ತಂದಿದ್ದಕ್ಕೆ ವ್ಯಥೆ -ಎಚ್‌.ವಿಶ್ವನಾಥ್‌

ವಿರೋಧ ಪಕ್ಷದ ನಾಯಕರ ವಿರುದ್ಧವೂ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 26 ಮೇ 2021, 21:59 IST
Last Updated 26 ಮೇ 2021, 21:59 IST
ಎಚ್‌.ವಿಶ್ವನಾಥ್‌
ಎಚ್‌.ವಿಶ್ವನಾಥ್‌   

ಮೈಸೂರು: ‘ಒಂದು ಎಕರೆಗೆ ₹ 1 ಕೋಟಿ ಬೆಲೆಬಾಳುವ 3,667 ಎಕರೆ ಭೂಮಿಯನ್ನು ₹ 1.12 ಲಕ್ಷದಂತೆ ಜಿಂದಾಲ್‌ಗೆ ಮಾರಾಟ ಮಾಡಲು, ಗುರುವಾರ (ಮೇ 27) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೊಡಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಎಚ್‌.ವಿಶ್ವನಾಥ್‌, ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿಆಗ್ರಹಿಸಿದರು.

‘ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಭೂಮಿ ಮಾರಾಟ ವಿರೋಧಿಸಿ, ಸದನದಲ್ಲೇ ಮೊಕ್ಕಾಂ ಹೂಡಿ ಪ್ರತಿಭಟಿಸಿದ್ದ ಆಗಿನ ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿಯಾದ ಬಳಿಕ ಇದೀಗ ಅದನ್ನೇ ಮಾರಲು ಮುಂದಾಗಿದ್ದಾರೆ. ಈ ಸರ್ಕಾರ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT