ADVERTISEMENT

ಮಾಲಗತ್ತಿ, ಕಲ್ಗುಡಿ, ನಾವಡಗೆ ಹಲಸಂಗಿ ಗೆಳೆಯರ ಪ್ರತಿಷ್ಠಾನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 16:06 IST
Last Updated 7 ಡಿಸೆಂಬರ್ 2021, 16:06 IST
ಅರವಿಂದ ಮಾಲಗತ್ತಿ
ಅರವಿಂದ ಮಾಲಗತ್ತಿ   

ವಿಜಯಪುರ:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2021ನೇ ಸಾಲಿನ ಸಾಹಿತ್ಯ ಸಾಧಕರ ಪ್ರಶಸ್ತಿ ಪ್ರಕಟವಾಗಿದೆ.

ಕಾವ್ಯ ಪ್ರಶಸ್ತಿಗೆ ಸಾಹಿತಿ ಡಾ.ಅರವಿಂದ ಮಾಲಗತ್ತಿ, ವಿಮರ್ಶೆ/ಸಂಶೋಧನಾ ಕ್ಷೇತ್ರದಲ್ಲಿ ಸಾಹಿತಿ ಡಾ.ಬಸವರಾಜ ಕಲ್ಗುಡಿ, ಜಾನಪದ ಕ್ಷೇತ್ರದಲ್ಲಿ ಮಂಗಳೂರಿನ ಡಾ.ಗಾಯತ್ರಿ ನಾವಡ ಆಯ್ಕೆಯಾಗಿದ್ದಾರೆ. ಮೂರು ಪ್ರಶಸ್ತಿಗಳು ತಲಾ ₹ 51 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

ಯುವ ಪ್ರಶಸ್ತಿಗೆ ಮಹಾರಾಷ್ಟ್ರದ ಜತ್‌ನ ಮಧು ಬಿರಾದಾರ ಆಯ್ಕೆಯಾಗಿದ್ದು, ಈ ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.

ADVERTISEMENT

ಡಿ.17ರಂದು ವಿಜಯಪುರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.