ADVERTISEMENT

ಮಠಗಳು ಭಯೋತ್ಪಾದನಾ ಕೇಂದ್ರಗಳಾಗದಿರಲಿ: ಹಂಪನಾ

​ಪ್ರಜಾವಾಣಿ ವಾರ್ತೆ
Published 12 ಮೇ 2019, 18:30 IST
Last Updated 12 ಮೇ 2019, 18:30 IST
ಹಂ.ಪ.ನಾಗರಾಜಯ್ಯ
ಹಂ.ಪ.ನಾಗರಾಜಯ್ಯ   

ಮೈಸೂರು: ‘ಮಠ, ಆಶ್ರಮಗಳು ಭಯೋತ್ಪಾದನೆಯ ಕೇಂದ್ರಗಳಾಗಬಾರದು’ ಎಂದು ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ತಿಳಿ ಹೇಳಿದರು.

ಇಲ್ಲಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಠಗಳಲ್ಲಿ ಉಗ್ರವಾದಿಗಳು ಸೃಷ್ಟಿ ಆಗಬಾರದು. ಬದಲಿಗೆ ಎಲ್ಲ ಜನರನ್ನೂ ಪ್ರೀತಿಸುವ ಪ್ರವೃತ್ತಿ ಬೆಳೆಯಬೇಕು. ಗುರುಗಳು ಈ ಬಗೆಯ ಪಾಠವನ್ನು ತಮ್ಮ ಶಿಷ್ಯಂದಿರಿಗೆ ಕಲಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.