ADVERTISEMENT

‘ಈ ವರ್ಷ ಹಂಪಿ ಉತ್ಸವ ಇಲ್ಲ’

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2018, 20:01 IST
Last Updated 27 ನವೆಂಬರ್ 2018, 20:01 IST

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಬರ ಇರುವುದರಿಂದ ಈ ವರ್ಷ ಹಂಪಿ ಉತ್ಸವ ನಡೆಸದಿರಲು ತೀರ್ಮಾನಿಸಿರುವುದಾಗಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕಳೆದ ವರ್ಷ ₹ 15 ಕೋಟಿ ಖರ್ಚು ಮಾಡಿ ಉತ್ಸವ ನಡೆಸಲಾಗಿತ್ತು. ಆದರೆ, ಈ ಬಾರಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಂಡಿಲ್ಲ. ಸಿದ್ಧತೆಗೆ ಒಂದು ತಿಂಗಳು ಬೇಕಾಗುತ್ತದೆ. ಆದ್ದರಿಂದ, ಮುಖ್ಯಮಂತ್ರಿ ಜತೆ ಚರ್ಚಿಸಿ ಉತ್ಸವ ನಡೆಸದಿರಲು ತೀರ್ಮಾನಿಸಲಾಯಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT