ADVERTISEMENT

ಹಾನಗಲ್‌, ಸಿಂದಗಿ ಉಪ ಚುನಾವಣ: ಶ್ರೀನಿವಾಸ ಮಾನೆ, ಮನಗೂಳಿಗೆ ಕಾಂಗ್ರೆಸ್‌ ಟಿಕೆಟ್

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 13:59 IST
Last Updated 5 ಅಕ್ಟೋಬರ್ 2021, 13:59 IST
ಶ್ರೀನಿವಾಸ ಮಾನೆ, ಹಾನಗಲ್‌ (ಎಡ), ಅಶೋಕ ಮನಗೂಳಿ(ಬಲ)
ಶ್ರೀನಿವಾಸ ಮಾನೆ, ಹಾನಗಲ್‌ (ಎಡ), ಅಶೋಕ ಮನಗೂಳಿ(ಬಲ)    

ನವದೆಹಲಿ: ರಾಜ್ಯದ ಹಾನಗಲ್‌ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಅಕ್ಟೋಬರ್‌ 30ರಂದು ನಡೆಯಲಿರುವ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಮಂಗಳವಾರ ಸಂಜೆ ಘೋಷಿಸಿದೆ.

ಹಾನಗಲ್‌ನಿಂದ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಸಿಂದಗಿಯಿಂದ ಅಶೋಕ ಮನಗೂಳಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಸಿಂದಗಿ ಕ್ಷೇತ್ರದ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರೇ ಪಕ್ಷದ ಅಭ್ಯರ್ಥಿ ಎಂದು ಈ ಮೊದಲೇ ಮೌಖಿಕವಾಗಿ ಘೋಷಿಸಲಾಗಿತ್ತಾದರೂ, ಇದೀಗ ಅಧಿಕೃತವಾಗಿ ಟಿಕೆಟ್‌ ನೀಡಲಾಗಿದೆ.

ADVERTISEMENT

2018ರ ಚುನಾವಣೆಯಲ್ಲಿ ಹಾನಗಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಶ್ರೀನಿವಾಸ ಮಾನೆ ಹಾಗೂ ಕ್ಷೇತ್ರವನ್ನು ಮೊದಲು ಪ್ರತಿನಿಧಿಸಿದ್ದ ಮನೋಹರ ತಹಶೀಲ್ದಾರ್‌ ಅವರ ನಡುವೆ ಟಿಕೆಟ್‌ಗಾಗಿ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಪಕ್ಷದ ವರಿಷ್ಠರು ಮಾನೆ ಅವರಿಗೇ ಟಿಕೆಟ್‌ ನೀಡಿ ಆದೇಶ ಹೊರೆಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.