ADVERTISEMENT

ಹಾನಗಲ್, ಸಿಂದಗಿ ಉಪ ಚುನಾವಣೆ: ಶಿವರಾಜ ಸಜ್ಜನ್, ರಮೇಶ ಭೂಸನೂರಗೆ ಬಿಜೆಪಿ ಟಿಕೆಟ್

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 8:25 IST
Last Updated 7 ಅಕ್ಟೋಬರ್ 2021, 8:25 IST
 ಶಿವರಾಜ ಸಜ್ಜನ್(ಎಡ) ಹಾಗೂ ಶಾಸಕ ರಮೇಶ ಭೂಸನೂರ(ಬಲ)
ಶಿವರಾಜ ಸಜ್ಜನ್(ಎಡ) ಹಾಗೂ ಶಾಸಕ ರಮೇಶ ಭೂಸನೂರ(ಬಲ)   

ನವದೆಹಲಿ: ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಹಾನಗಲ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನ್ ಅವರನ್ನು ಹಾಗೂ ಸಿಂದಗಿಯಲ್ಲಿ ಮಾಜಿ ಶಾಸಕರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಸಿಂದಗಿ ಕ್ಷೇತ್ರಕ್ಕೆ ರಮೇಶ ಭೂಸನೂರ ಅವರಿಗೆ‌ ನಿರೀಕ್ಷೆಯಂತೆ‌ ಟಿಕೆಟ್ ನೀಡಲಾಗಿದೆ.

ADVERTISEMENT

ಹಾನಗಲ್ ನಲ್ಲಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷ ಹುಸಿಯಾಗಿದೆ.

ಎರಡೂ ಕ್ಷೇತ್ರಗಳ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.